ಕಳೆದ ವರ್ಷ ಡಿಸೆಂಬರ್ 21ರಂದು ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಹುಕೋಟಿ 2 ಜಿ ಸ್ಪೆಕ್ಟ್ರಂ ಹಗರಣದ ತೀರ್ಪು ಪ್ರಕಟಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯ, ಪ್ರಕರಣದ ಪ್ರಮುಖ ಆರೋಪಿಗಳಾದ ಮಾಜಿ ಟೆಲಿಕಾಂ ಸಚಿವ ಎ.ರಾಜಾ ಹಾಗೂ ಡಿಎಂಕೆ ರಾಜ್ಯಸಭಾ ಸದಸ್ಯೆ ಕನಿಮೋಳಿ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ಆರೋಪಮುಕ್ತಗೊಳಿಸಿತ್ತು.