ಪ್ರಾಥಮಿಕ ವರದಿಯನ್ನು ಸಲ್ಲಿಸಲೂ ಕೂಡ ಪೊಲೀಸರಿಗೆ ಲಂಚವನ್ನು ನೀಡಬೇಕಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ನಾನು ಮಾತನಾಡಿದರೆ, ನಾನು ಕಾಂಗ್ರೆಸ್ ಪಕ್ಷದ ಕಡೆ ಎಂದು ಹೇಳುತ್ತಾರೆ. ಸ್ವಾತಂತ್ರ್ಯ ಹೋರಾಟ ನಡೆಯುತ್ತಿದ್ದ ಸಂದರ್ಭದಲ್ಲಿ ನಾನು ಕಾಂಗ್ರೆಸ್ಸಿಗನಾಗಿದ್ದೆ. ಆಗ ಬ್ರಿಟೀಷ್ ಆಡಳಿತದ ವಿರುದ್ಧ ಕಾಂಗ್ರೆಸ್ ಮಾತ್ರವೇ ಹೋರಾಟ ಮಾಡುತ್ತಿತ್ತು. ಇಂದು ನಾನು ಧಾರ್ಮಿಕ ನಾಯಕನಾಗಿದ್ದೇನೆ. ನಾನು ಶಂಕರಾಚಾರ್ಯ. ಸನಾತನ ಧರ್ಮವನ್ನು ರಕ್ಷಣೆ ಮಾಡುವುದು ನನ್ನ ಕರ್ತವ್ಯ ಎಂದು ತಿಳಿಸಿದ್ದಾರೆ.