ಶ್ರೀನಗರಲ್ಲಿ ನಡೆದ ಕಾರ್ಯಕ್ರಮದವೊಂದರಲ್ಲಿ ಮಾತನಾಡಿರುವ ಅವರು, ಇಸ್ಲಾಂ ಶಾಂತಿಯ ಧರ್ಮವಾಗಿದೆ. ಇದು ಕೇವಲ ಮುಸ್ಲಿಮರಿಗೆ ಮಾತ್ರವಲ್ಲ. ಇಡೀ ಮಾನವಕುಲಕ್ಕೆ ಮತ್ತು ಸಸ್ಯ ಹಾಗೂ ಪ್ರಾಣಿ ಸಂಕುಲಕ್ಕೆ ಮಾರ್ಗದರ್ಶನ ಸೂತ್ರಗಳನ್ನು ನೀಡಿದೆ. ಜ್ಞಾನ ಪಡೆದುಕೊಳ್ಳಲು ಇಸ್ಲಾಂನಲ್ಲಿ ಸಾಕಷ್ಟು ಮಹತ್ವವನ್ನು ನೀಡಲಾಗಿದೆ. ವಿದ್ವಾಂಸರು ಹಾಗೂ ಮೌಲ್ವಿಗಳು ಈ ಸಂದೇಶವನ್ನು ಜನರಿಗೆ ನೀಡಬೇಕಿದೆ. ಇದರಿಂದ ಮುಸ್ಲಿಮರು ತಮ್ಮ ಸಮಸ್ಯೆಗಳಿಂದ ಹೊರಬರಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.