ನವದೆಹಲಿ: ಸರ್ಕಾರಿ ನೌಕರರ ವಿರುದ್ಧದ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ (ಎಸ್ಸಿ, ಎಸ್ಟಿ) ದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ದುರುಪಯೋಗವಾಗುವುದುನ್ನು ತಡೆಯಲು ಸುಪ್ರೀಂ ಕೋರ್ಟ್ ಕಠಿಣ ನಿರ್ಧಾರಕ್ಕೆ ಮುಂದಾಗಿದೆ. ಈ ಕಾಯ್ದೆಯಡಿಯಲ್ಲಿ ಯಾರೇ ದೂರು ಸಲ್ಲಿಸಿದರೂ ಸರ್ಕಾರಿ ನೌಕರರನ್ನು ತಕ್ಷಣ ಬಂಧಿಸಬಾರದು ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನಿಡಿದೆ.