ಎಸ್ಸಿ/ ಎಸ್ಟಿ ಕಾಯ್ದೆಯಡಿ ಸರ್ಕಾರಿ ನೌಕರರ ತತ್‌ಕ್ಷಣದ ಬಂಧನ ಸಲ್ಲದು: ಸುಪ್ರೀಂ ಕೋರ್ಟ್

ಸರ್ಕಾರಿ ನೌಕರರ ವಿರುದ್ಧದ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ (ಎಸ್‌ಸಿ, ಎಸ್‌ಟಿ) ದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ದುರುಪಯೋಗವಾಗುವುದುನ್ನು ತಡೆಯಲು ಸುಪ್ರೀಂ ಕೋರ್ಟ್.......
ಸರ್ವೋಚ್ಛ ನ್ಯಾಯಾಲಯ
ಸರ್ವೋಚ್ಛ ನ್ಯಾಯಾಲಯ
Updated on
ನವದೆಹಲಿ: ಸರ್ಕಾರಿ ನೌಕರರ ವಿರುದ್ಧದ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ (ಎಸ್‌ಸಿ, ಎಸ್‌ಟಿ) ದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ದುರುಪಯೋಗವಾಗುವುದುನ್ನು ತಡೆಯಲು ಸುಪ್ರೀಂ ಕೋರ್ಟ್ ಕಠಿಣ ನಿರ್ಧಾರಕ್ಕೆ ಮುಂದಾಗಿದೆ. ಈ ಕಾಯ್ದೆಯಡಿಯಲ್ಲಿ ಯಾರೇ ದೂರು ಸಲ್ಲಿಸಿದರೂ ಸರ್ಕಾರಿ ನೌಕರರನ್ನು ತಕ್ಷಣ ಬಂಧಿಸಬಾರದು ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನಿಡಿದೆ.
ಡೆಪ್ಯುಟಿ ಪೋಲೀಸ್ ಸೂಪರಿಟೆಂಡೆಂಟ್ ಅವರ ಮಟ್ಟದ ಅಧಿಕಾರಿಗಳು ಇಂತಹಾ ದೂರುಗಳ ಸತ್ಯಾಸತ್ಯತೆಯನ್ನು ತನಿಖೆ ನಡೆಸಬೇಕು. ಆ ಬಳಿಕವೇ ಸರ್ಕಾರಿ ನೌಕರರನ್ನು ಬಂಧಿಸಬಹುದು  ಎಂದು ನ್ಯಾಯಾಲಯ ಹೇಳಿದೆ.
ನ್ಯಾಯಮೂರ್ತಿ ಆದರ್ಶ್‌ ಗೋಯಲ್‌ ಮತ್ತು ಯು ಯು ಲಲಿತ್‌ ಅವರನ್ನೊಳಗೊಂಡ ನ್ಯಾಯಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದ್ದು  ಕಾಯ್ದೆಯಲ್ಲಿ ಬಂಧಿತರಾದ ಸರ್ಕಾರಿ ನೌಕರರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರೆ ಅವರಿಗೆ ಜಾಮೀನು ಮಂಜೂರು ಮಾಡುವುದಕ್ಕೆ ಯಾವ ನಿರ್ಬಂಧವಿರುವುದಿಲ್ಲ ಎಂದು ಹೇಳಿದೆ.
ಉಚಿತ ಸ್ಥಾನದಲ್ಲಿರುವ ಅಧಿಕಾರಿಯ ಪೂರ್ವಾನುಮತಿ  ಪಡೆದ ಬಳಿಕವೇ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಸರ್ಕಾರಿ ನೌಕರರನ್ನು ಬಂಧನ ಮಾಡಬಹುದು ಎಂದು ನ್ಯಾಯಪೀಠ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com