ಗಡಿಯಲ್ಲಿ ಪಾಕಿಸ್ತಾನ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಐವರು ನಾಗರೀಕರು ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಪಾಕಿಸ್ತಾನದ ದುರ್ವರ್ತನೆಗೆ ತೀವ್ರವಾಗಿ ಪ್ರತಿಭಟನೆ ವ್ಯಕ್ತಪಡಿಸಿರುವ ಭಾರತ, ಪಾಕಿಸ್ತಾನ ರಾಯಭಾರಿ ಸಯ್ಯದ್ ಹೈದರ್ ಶಾಹ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಇಂತಹ ಘೋರ ಕೃತ್ಯಗಳು ಮಾನವೀಯ ನಿಯಮಗಳಿಗೆ ಹಾಗೂ ವೃತ್ತಿಪರ ಸೇನೆಯ ವರ್ತನೆಗೆ ವಿರುದ್ಧವಾಗಿದೆ ಎಂದು ಸಮನ್ಸ್'ನಲ್ಲಿ ತಿಳಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.