"ಕೇಂಬ್ರಿಡ್ಜ್ ಅನಲಿಟಿಕ್ಸ್ ಸಂಸ್ಥೆಯಿಂದ ರಾಹುಲ್ ಗಾಂಧಿಯಾಗಲೀ ಅಥವಾ ಕಾಂಗ್ರೆಸ್ ಪಕ್ಷವಾಗಲಿ ಯಾವುದೇ ರೀತಿಯ ಸೇವೆ ಪಡೆದಿಲ್ಲ. ಬಿಜೆಪಿಯ ರವಿಶಂಕರ್ ಪ್ರಸಾದ್ ಅವರು ಜನರ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದು, ಸ್ವತ- ಬಿಜೆಪಿ ಪಕ್ಷವೇ ಸುಳ್ಳಿನ ಕಂತೆಗಳ ಕಾರ್ಖಾನೆಯಾಗಿದ್ದು, ದಿನಕ್ಕೊಂದು ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ನಕಲಿ ಹೇಳಿಕೆಗಳು, ನಕಲಿ ಪತ್ರಿಕಾ ಗೋಷ್ಠಿಗಳು, ನಕಲಿ ಅಜೆಂಡಾಗಳು ಇವೆಲ್ಲಾ ಬಿಜೆಪಿ ಲಕ್ಷಣಗಳಾಗಿವೆ ಎಂದು ಸುರ್ಜೇವಾಲಾ ಹೇಳಿದ್ದಾರೆ.