ಜಮ್ಮು-ಕಾಶ್ಮೀರ : ಕುಪ್ವಾರದಲ್ಲಿ ಮತ್ತೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ

ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಇಂದು ಮತ್ತೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಪೊಲೀಸರೊಬ್ಬರು ಗಾಯಗೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಇಂದು ಮತ್ತೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ  ಚಕಮಕಿ  ನಡೆದಿದ್ದು, ಪೊಲೀಸರೊಬ್ಬರು ಗಾಯಗೊಂಡಿದ್ದಾರೆ.

ಈ ಪ್ರದೇಶದಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಬಳಿಕ ಮತ್ತೆ ಗುಂಡಿನ ದಾಳಿ ಆರಂಭವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

 ಗುಂಡಿನ ದಾಳಿ ವೇಳೆ ತೀವ್ರವಾಗಿ ಗಾಯಗೊಂಡಿರುವ ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ನಿನ್ನೆ ರಾತ್ರಿಯಿಂದಲೂ ಕಾರ್ಯಾಚರಣೆ ನಡೆಯುತ್ತಲೇ ಇದೆ. ಅರಂಪುರ ವಲಯದಲ್ಲಿ ನಿನ್ನೆ ಎನ್ ಕೌಂಟರ್ ನಡೆದಿತ್ತು. ಗಸ್ತುವಿನಲ್ಲಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ ಬಳಿಕ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com