15 ದಿನಗಳ ತುರ್ತು ಪೆರೋಲ್ ಮಂಜೂರು: ತಂಜಾವೂರಿಗೆ ತೆರಳಿದ ವಿ.ಕೆ.ಶಶಿಕಲಾ

ಪತಿ ನಟರಾಜನ್ ಮುರುತಪ್ಪ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಎಐಎಡಿಎಂಕೆ ಉಚ್ಛಾಟಿತ ಮುಖ್ಯಸ್ಥೆ ವಿ.ಕೆ.ಶಶಿಕಲಾ ಅವರಿಗೆ 15 ದಿನಗಳ ಕಾಲ ತುರ್ತು ಪೆರೋಲ್ ಮಂಜೂರಾಗಿದೆ ಎಂದು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಹೇಳಿದ್ದಾರೆ...
15 ದಿನಗಳ ತುರ್ತು ಪೆರೋಲ್ ಮಂಜೂರು: ತಂಜಾವೂರಿಗೆ ತೆರಳಿದ ವಿ.ಕೆ.ಶಶಿಕಲಾ
15 ದಿನಗಳ ತುರ್ತು ಪೆರೋಲ್ ಮಂಜೂರು: ತಂಜಾವೂರಿಗೆ ತೆರಳಿದ ವಿ.ಕೆ.ಶಶಿಕಲಾ
Updated on
ಚೆನ್ನೈ: ಪತಿ ನಟರಾಜನ್ ಮುರುತಪ್ಪ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಎಐಎಡಿಎಂಕೆ ಉಚ್ಛಾಟಿತ ಮುಖ್ಯಸ್ಥೆ ವಿ.ಕೆ.ಶಶಿಕಲಾ ಅವರಿಗೆ 15 ದಿನಗಳ ಕಾಲ ತುರ್ತು ಪೆರೋಲ್ ಮಂಜೂರಾಗಿದೆ ಎಂದು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಹೇಳಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹದಲ್ಲಿರುವ ಶಶಿಕಲಾ ಪತಿ ನಿಧನ ಹೊಂದಿರುವ ಹಿನ್ನಲೆಯಲ್ಲಿ 15 ದಿನಗಳ ಕಾಲ ಪೆರೋಲ್ ನೀಡುವಂತೆ ಜೈಲಿನ ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದರು. 
ಇದರಂತೆ 15 ದಿನಗಳ ಪೆರೋಲ್ ಮಂಜೂರಾಗಿದ್ದು, ವಿ.ಕೆ.ಶಶಿಕಲಾ ಅವರು, ಪತಿಯ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಲುವಾಗಿ ನೇರವಾಗಿ ತಂಜಾವೂರಿಗೆ ಭೇಟಿ ನೀಡಿದ್ದಾರೆಂದು ವರದಿಗಳು ತಿಳಿಸಿವೆ. 
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶಶಿಕಲಾ ಅವರ ಪತಿ ನಟರಾಜನ್ ಅವರು ಚೆನ್ನೈನ ಗ್ಲೆನೇಗಲ್ಸ್ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನ ಹೊಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com