ಕಳೆದ ಆರು ವರ್ಷಗಳಲ್ಲಿ ಕಾರ್ಯಾಚರಣೆ ವೇಳೆ ಹುತಾತ್ಮರಾದವರಿಗಿಂತ ಹಚ್ಚು ಸಿಎಪಿಎಫ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸ್ಥಿರತೆ, ಏಕಾಂಗಿತನ ಮತ್ತು ಕುಟುಂಬ ಕಲಹ ಸಿಎಪಿಎಫ್ ಸಿಬ್ಬಂದಿ ಆತ್ಮಹತ್ಯೆಗೆ ಕಾರಣ ಎಂದು ಕೇಂದ್ರ ಗೃಹ ಕಾರ್ಯದರ್ಶಿ ನೇತೃತ್ವದ ಹಿರಿಯ ಅಧಿಕಾರಿಗಳು ಬಿಜೆಪಿ ನಾಯಕ ಮುರಳಿ ಮನೋಹರ್ ಜೋಶಿ ನೇತೃತ್ವದ ಅಂದಾಜು ಸಮಿತಿಗೆ ಮಾಹಿತಿ ನೀಡಿದ್ದಾರೆ.