ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ನಾಯಕರಾದ ಪ್ರಕಾಶ್ ಜಾವಡೇಕರ್ ಮತ್ತು ಅನಿಲ್ ಬಲೂನಿ ಅವರು, ಪ್ರತಿಪಕ್ಷಗಳು ಅನಗತ್ಯವಾಗಿ ಸಂಸತ್ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ. ಈ ವಿಚಾರವನ್ನು ಮುಂದಿನ ಮೂರು ದಿನಗಳಲ್ಲಿ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಪತ್ರಿಕಾಗೋಷ್ಠಿ ನಡೆಸಿ ಜನತೆಗೆ ತಿಳಿಸಬೇಕು ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಂಸದರಿಗೂ ಸೂಚಿಸಿರುವುದಾಗಿ ತಿಳಿಸಿದ್ದಾರೆ.