ನನ್ನನ್ನು ದೇವರು ಕೂಗುತ್ತಿದ್ದು, ನನ್ನ ಪ್ರಾಣವನ್ನು ದೇವರಿಗೆ ಅರ್ಪಿಸುತ್ತೇನೆಂದು ಹೇಳಿದ ಪ್ರಸಾದ್, ಇದ್ದಕ್ಕಿದ್ದಂತೆಯೇ ಕೈ ಹಾಗೂ ಕುತ್ತಿಗೆ ಕೊಯ್ದುಕೊಂಡಿದ್ದಾನೆ. ಈ ವೇಳೆ ಆಘಾತಗೊಂಡ ಪೂಜಾರಿ ಜೋರಾಗಿ ಕೂಗಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಭದ್ರತಾ ಸಿಬ್ಬಂದಿಗಳೂ ಕೂಡಲೇ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದುಬಂದಿದೆ.