ಸಮರ್ಥ ಲೋಕಪಾಲ ನೇಮಕ ಮತ್ತು ರೈತರ ಬೆಳೆಗಳಿಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ಇಂದಿನಿಂದ ಅಣ್ಣಾ ಹಾಜಾರೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಅನಿರ್ಧಿಷ್ಟಾವಧಿ ಧರಣಿ ಆರಂಭಿಸುತ್ತಿದ್ದು, ಧರಣಿಯಲ್ಲಿ ಲಕ್ಷಾಂತರ ರೈತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಧರಣಿ ಆರಂಭಕ್ಕೆ ಕ್ಷಣಗಣನೆ ಇರುವಂತೆಯೇ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಅಣ್ಣಾ ಹಜಾರೆ, ಪ್ರತಿಭಟನೆಯನ್ನು ಹತ್ತಿಕ್ಕುವ ಸಂಬಂಧ ರೈತರು ಆಗಮಿಸುತ್ತಿದ್ದ ರೈಲುಗಳನ್ನು ರದ್ದು ಮಾಡಲಾಗಿದ್ದು, ನೀವೇ ಪರೋಕ್ಷವಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದೀರಿ ಎಂದು ಹೇಳಿದ್ದಾರೆ.