ರಾಜ್ಯಸಭೆ ಚುನಾವಣೆ: ಬಿಜೆಪಿಗೆ ಮತಹಾಕಿದ ಬಿಎಸ್ ಪಿ ಶಾಸಕ ಅನಿಲ್ ಕುಮಾರ್ ಸಿಂಗ್ ಪಕ್ಷದಿಂದ ಅಮಾನತು

ಉತ್ತರ ಪ್ರದೇಶ ರಾಜ್ಯಸಭೆ ಚುನಾವಣೆಯಲ್ಲಿಅಡ್ಡಮತದಾನ ಮಾಡಿದ ಬಿಎಸ್ ಪಿ ಶಾಸಕ ಅನಿಲ್ ಕುಮಾರ್ ಸಿಂಗ್ ರನ್ನು ಪಕ್ಷದ ಮುಖ್ಯಸ್ಥೆ ಮಾಯಾವತಿ ಅಮಾನತು ಮಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಲಖನೌ: ಉತ್ತರ ಪ್ರದೇಶ ರಾಜ್ಯಸಭೆ ಚುನಾವಣೆಯಲ್ಲಿಅಡ್ಡಮತದಾನ ಮಾಡಿದ ಬಿಎಸ್ ಪಿ ಶಾಸಕ ಅನಿಲ್ ಕುಮಾರ್ ಸಿಂಗ್ ರನ್ನು ಪಕ್ಷದ ಮುಖ್ಯಸ್ಥೆ ಮಾಯಾವತಿ ಅಮಾನತು ಮಾಡಿದ್ದಾರೆ.
ರಾಜ್ಯಸಭೆಯಲ್ಲಿ ಪಕ್ಷದ ಆದೇಶ ಉಲ್ಲಂಘಿಸಿ ಬಿಜೆಪಿ ಪರ ಅಡ್ಡಮತದಾನ ಮಾಡಿದ ಹಿನ್ನಲೆಯಲ್ಲಿ ಶಾಸಕ ಅನಿಲ್ ಕುಮಾರ್ ಸಿಂಗ್ ವಿರುದ್ದ ಬಿಎಸ್ ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಶಿಸ್ತು ಕ್ರಮ ಕೈಗೊಂಡಿದ್ದಾರೆ. ಶಿಸ್ತು ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಶಾಸಕ ಅನಿಲ್ ಕುಮಾರ್ ಸಿಂಗ್ ರನ್ನು ಪಕ್ಷದಿಂದ ಅಮಾನತು ಮಾಡಿದ್ದಾರೆ.
ನಿನ್ನೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಎಸ್ ಪಿ ಶಾಸಕ ಅನಿಲ್ ಕುಮಾರ್ ಸಿಂಗ್ ಬ್ಯಾಲೆಟ್ ಪೇಪರ್ ನಲ್ಲಿ ಬಿಜೆಪಿ ಗುರುತಿಗೆ ಟಿಕ್ ಮಾಡಿ ಮತ ಹಾಕಿದ್ದರು. ಈ ವೇಳೆ ಮಾತನಾಡಿದ ಅವರು ಪ್ರಸ್ತುತ ನಾನು ಮಾತ್ರ ಬಿಜೆಪಿ ಮತ ನೀಡಿದ್ದು, ಇತರರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com