ಕೆಲ ದಿನಗಳ ಹಿಂದಷ್ಟೇ ಕೇಂಬ್ರಿಜ್ ಅನಾಲಿಟಿಕಾಗೆ ಎಚ್ಚರಿಕೆ ನೀಡಿದ್ದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ್ ಪ್ರಸಾದ್ ಅವರು, ಭಾರತೀಯ ಚುನಾವಣೆ ಪ್ರಕ್ರಿಯೆ ಮೇಲೆ ಯಾವುದೇ ರೀತಿಯ ಅನಪೇಕ್ಷಿತ ಪ್ರಭಾವ ಬೀರುವ ಘಟನೆಗಳು ಕಾಣಿಸಿದರೆ ಫೇಸ್'ಬುಕ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದರು.