ಇರಾಕ್ ನಲ್ಲಿ 3 ವರ್ಷಗಳ ಹಿಂದೆ ಅಪಹರಣಕ್ಕೊಳಗಾಗಿದ್ದ 39 ಭಾರತೀಯರು ಹತ್ಯೆಗೀಡಾಗಿದ್ದಾರೆಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ದೃಢಪಡಿಸಿದ್ದರು. ರಾಜ್ಯಸಭೆಯಲ್ಲಿ ಮಾತನಾಡಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಅಪಹರಣಕ್ಕೊಳಗಾಗಿದ್ದ 39 ಭಾರತೀಯರನ್ನು ವರ್ಷಗಳ ಹಿಂದೆಯೇ ಇಸಿಸ್ ಉಗ್ರರು ಹತ್ಯೆ ಮಾಡಿದ್ದು, ಸಾಮೂಹಿಕ ಸಮಾಧಿ ಮಾಡಿದ್ದಾರೆ. ಡಿಎನ್ಎ ಪರೀಕ್ಷೆ ಮೂಲಕ ಹತ್ಯೆಗೀಡಾಗಿದ್ದ ಭಾರತೀಯರನ್ನು ಗುರ್ತಿಸಲಾಗಿದೆ ಎಂದು ಹೇಳಿದ್ದರು.