ಮರಳು ಗಣಿಗಾರಿಕೆ ಅಕ್ರಮದ ಕುರಿತು ಕುಟುಕು ಕಾರ್ಯಾಚರಣೆ ನಡೆಸಿ ವರದಿ ಮಾಡಿದ್ದ ಭಿಂಡ್ನ ಸ್ಥಳೀಯ ಟಿವಿ ವಾಹಿನಿ ವರದಿಗಾರ ಸಂದೀಪ್ ಶರ್ಮಾ ಅವರ ಮೇಲೆ ಸೋಮವಾರ ಟ್ರಕ್ ಹರಿದ ಪರಿಣಾಮ ಅವರು ಮೃತಪಟ್ಟಿದ್ದಾರೆ. ಇಲ್ಲಿನ ಅತೇರ್ ರಸ್ತೆಯ ಪೊಲೀಸ್ ಠಾಣೆಯ ಮುಂಭಾಗ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಸಂದೀಪ್ ಅವರ ಮೇಲೆ ಮರಳು ಸಾಗಣೆ ಟ್ರಕ್ ಹರಿದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.