ಇಂದು ದೆಹಲಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಣೆ ಬಳಿಕ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಓಪಿ ರಾವತ್ ಅವರು, ನೀತಿ ಸಂಹಿತೆಗೂ ಕಾವೇರ ನಿರ್ವಹಣಾ ಮಂಡಳಿ ರಚನೆಗೂ ಯಾವುದೇ ಸಂಬಂಧವಿಲ್ಲ. ಕಾವೇರಿ ನಿರ್ವಹಣಾ ಮಂಡಳಿ ರಚನೆ ಮೇಲೆ ನೀತಿ ಸಂಹಿತೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬಹುದು. ಇದಕ್ಕೆ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ ಎಂದು ಓಪಿ ರಾವತ್ ಹೇಳಿದರು.