ಛತ್ತೀಸಗಢ: ಬಿಜೆಪಿ ನಾಯಕನನ್ನು ಹತ್ಯೆಗೈದ ಶಂಕಿತ ಮಾವೋವಾದಿಗಳು!

ಬಿಜೆಪಿ ಸರ್ಕಾರವಿರುವ ಛತ್ತೀಸಗಢದ ಬಿಜಾಪುರ ಜಿಲ್ಲೆಯ ಬಸ್ತಾರ್ ನಲ್ಲಿ ಶಂಕಿತ ಮಾವೋವಾದಿಗಳು ಬಿಜೆಪಿ ಮುಖಂಡರೊಬ್ಬರನ್ನು ಹತ್ಯೆಗೈದು ಪರಾರಿಯಾಗಿದ್ದಾರೆ...
ಬಿಜೆಪಿ
ಬಿಜೆಪಿ
ರಾಯಪುರ್: ಬಿಜೆಪಿ ಸರ್ಕಾರವಿರುವ ಛತ್ತೀಸಗಢದ ಬಿಜಾಪುರ ಜಿಲ್ಲೆಯ ಬಸ್ತಾರ್ ನಲ್ಲಿ ಶಂಕಿತ ಮಾವೋವಾದಿಗಳು ಬಿಜೆಪಿ ಮುಖಂಡರೊಬ್ಬರನ್ನು ಹತ್ಯೆಗೈದು ಪರಾರಿಯಾಗಿದ್ದಾರೆ. 
ಬಿಜೆಪಿ ಯೂತ್ ಲೀಡರ್ ಜಗದೀಶ್ ಕೊಂದ್ರಾ ಅವರ ನಿವಾಸಕ್ಕೆ ಆಗಮಿಸಿದ ನಾಲ್ವರು ಚೂಪಾದ ಕತ್ತಿಗಳಿಂದ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಜಗದೀಶ್ ರನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. 
ಮಾವೋವಾದಿಗಳು ಈ ದುಷ್ಕೃತ್ಯ ಎಸಗಿರಬಹುದು ಎಂದು ಬಿಜಾಪುರದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ದಿವ್ಯಾಂಗ್ ಪಟೇಲ್ ತಿಳಿಸಿದ್ದಾರೆ. 
ಆರೋಪಿಗಳ ಪತ್ತೆಗಾಗಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಈ ಘಟನೆ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com