ಎಐಎಡಿಎಂಕೆ ಬಣಗಳ ನಡುವೆ ತಾರಕಕ್ಕೇರಿದ್ದ ಎರಡೆಲೆ ಚಿನ್ಹೆಗಾಗಿ ಕಿತ್ತಾಟ ಮತ್ತೆ ಆರಂಭವಾಗುವ ಸಾಧ್ಯತೆ ಇದ್ದು, ದಿನಕರನ್ ಬಣಕ್ಕೆ ನೀಡಲಾಗಿದ್ದ ಕುಕ್ಕರ್ ಚಿನ್ಹೆಯನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಎಎಂ ಖಾನ್ವಿಲ್ಕರ್ ನೇತೃತ್ವದ ದ್ವಿಸದಸ್ಯ ಪೀಠ ಚಿನ್ಹೆ ವಿವಾದವನ್ನು ವಿಚಾರಣೆ ನಡೆಸುವಂತೆ ದೆಹಲಿ ಹೈಕೋರ್ಟ್ ಗೆ ಸೂಚನೆ ನೀಡಿದೆ. ಅಲ್ಲದೆ ವಿವಾದದ ಕುರಿತು ಹೈಕೋರ್ಟ್ ನ ಇಬ್ಬರು ನ್ಯಾಯಾಧೀಶರ ನೇತೃತ್ವದಲ್ಲಿ ಪೀಠ ರಚನೆ ಮಾಡಿ ವಿವಾದ ಇತ್ಯರ್ಥ ಮಾಡುವಂತೆ ಸೂಚನೆ ನೀಡಿದೆ.