ಉತ್ತರ ಪ್ರದೇಶದ ಎಲ್ಲ ದಾಖಲೆಗಳಲ್ಲಿ ಇನ್ನು ಮುಂದೆ ಪರಿಸ್ಕೃತ ಹೆಸರನ್ನೆ ಬಳಸಬೇಕು. ಎಂದು ಸಾರ್ವಜನಿಕ ಆಡಳಿತದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಮಾರ್ ಮಂಗಳವಾರ ಸುತ್ತೋಲೆ ಹೊರಡಿಸಿದ್ದರು. ಬುಧವಾರ ಈ ಸಂಬಂಧ ರಾಜ್ಯಪಾಲ ರಾಮ್ ನಾಯ್ಕ್ ಅಂಕಿತ ಪಡೆದ ರಾಜ್ಯ ಸರ್ಕಾರ ಈ ಆದೇಶ ಜಾರಿ ಮಾಡಿದೆ. ಆದೇಶದ ಪ್ರತಿಗಳು ಅಲಹಾಬಾದ್ ಮತ್ತು ಲಖನೌದಲ್ಲಿನ ಹೈಕೋರ್ಟ್ ಪೀಠದ ರೆಜಿಸ್ಟ್ರಾರ್ ಕಚೇರಿಗಳಿಗೂ ತಲುಪಿದೆ.