ಅಪರಾಧಿಗಳಿಗೆ ಮಾನವ ಹಕ್ಕು ಇಲ್ಲ: ಮಧ್ಯ ಪ್ರದೇಶ ಸಿಎಂ ಚೌಹಾಣ್

ಅಪರಾಧಿಗಳನ್ನು ಸಾರ್ವಜನಿಕವಾಗಿ ಎನ್ ಕೌಂಟರ್ ಮಾಡುತ್ತಿರುವ ಪೊಲೀಸರ ಕ್ರಮವನ್ನು ಸಮರ್ಥಿಸಿಕೊಂಡ ಮಧ್ಯ ಪ್ರದೇಶ....
ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್
ಭೋಪಾಲ್: ಅಪರಾಧಿಗಳನ್ನು ಸಾರ್ವಜನಿಕವಾಗಿ ಎನ್ ಕೌಂಟರ್ ಮಾಡುತ್ತಿರುವ ಪೊಲೀಸರ ಕ್ರಮವನ್ನು ಸಮರ್ಥಿಸಿಕೊಂಡ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಸಮಾಜ ವಿರೋಧಿ ಶಕ್ತಿಗಳಿಗೆ ಮಾನವ ಹಕ್ಕು ಇಲ್ಲ ಎಂದು ಶುಕ್ರವಾರ ಹೇಳಿದ್ದಾರೆ.
ಇಂದು ಮಹಿಳಾ ಸುರಕ್ಷತೆ ಮತ್ತು ಭದ್ರತೆ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಿದ ಮಧ್ಯ ಪ್ರದೇಶ ಸಿಎಂ, ತಮ್ಮ ಸರ್ಕಾರ ಮಹಿಳೆಯರ ವಿರುದ್ಧದ ಅಪರಾಧಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದಿದ್ದಾರೆ.
ಮಹಿಳೆಯರ ಭದ್ರತೆಗೆ ನಮ್ಮ ಸರ್ಕಾರ ಮೊದಲ ಆದ್ಯತೆ ನೀಡಿದೆ. ನಮ್ಮ ಹೆಣ್ಣು ಮಕ್ಕಳಿಗೆ ಕೀಟಲೆ ಮಾಡುವವರಿಗೆ ಮಾನವ ಹಕ್ಕು ಅನ್ವಯಿಸುವುದಿಲ್ಲ ಎಂದಿದ್ದಾರೆ.
ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಎಲ್ಲಾ ಅಧಿಕಾರ ಪೊಲೀಸರಿಗೆ ಇದೆ ಎಂದು ಸಿಎಂ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com