ರಾಜಸ್ತಾನ: ಮಾ.31 ರಂದು ಹನುಮಾನ್ ಜಯಂತಿ ಆಚರಣೆ ನಡೆಯಲಿದ್ದು, ರಾಜಸ್ತಾನದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್ ನೆಟ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ಕೋಮು ಗಲಭೆಯನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಹನುಮಾನ್ ಜಯಂತಿ ಆಚರಣೆಗೂ ಮುನ್ನ ಹಿಂದೂ ಹಾಗೂ ಮುಸಲ್ಮಾನ ಸಮುದಾಯದವರು ಹನುಮಾನ್ ಜಯಂತಿ ಆಚರಣೆಯ ವೇಳೆ ಶಸ್ತ್ರಾಸ್ತ್ರಗಳನ್ನು ತರುವುದಾಗಿ ಟ್ವಿಟರ್ ನಲ್ಲಿ ಹೇಳಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.
ಫೇಸ್ ಬುಕ್, ವಾಟ್ಸ್ ಆಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಿಗೂ ಸಹ ನಿರ್ಬಂಧ ವಿಧಿಸಲಾಗಿದೆ.
Advertisement