ಇಸಿಸ್ ಉಗ್ರರಿಂದ ತಪ್ಪಿಸಿಕೊಂಡು ಬಂದಿದ್ದ ಹರ್ಜಿತ್ ಮಾಸಿ ಎಂಬುವವರು, 39 ಭಾರತೀಯರನ್ನು ಇಸಿಸ್ ಉಗ್ರರು ಹತ್ಯೆ ಮಾಡಿದ್ದಾರೆಂದು ಹೇಳಿದ್ದರು. ಹರ್ಜಿತ್ ಕೆಲವು ಬಾಂಗ್ಲಾದೇಶಿ ಕೈದಿಗಳ ಜೊತೆ ಸೇರಿ ಇಸಿಸ್ ಉಗ್ರರ ಹಿಡಿತದಿಂದ ತಪ್ಪಿಸಿಕೊಂಡು ಬಂದಿದ್ದರು. ಉಗ್ರರು ತಮ್ಮ ಕಾಲಿಗೆ ಗುಂಡು ಹೊಡೆದಿದ್ದರು. ಸತ್ತಂತೆ ನಟಿಸಿ ಅಲ್ಲಿಂದ ತಪ್ಪಿಸಿಕೊಂಡಿದ್ದೆ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಸುಷ್ಮಾ ಸ್ವರಾಜ್ ಅವರು ಸುಳ್ಳು ಎಂದು ಸ್ಪಷ್ಟಪಡಿಸಿದ್ದರು.