ಈ ಬಗ್ಗೆ ಕೇಂದ್ರ ಸಿಬಂದಿ ಮತ್ತು ತರಬೇತಿ ಸಚಿವಾಲಯ ನಿಯಮಾವಳಿಯೊಂದನ್ನು ಅಂತಿಮಗೊಳಿಸಿದ್ದು, ಇದರಲ್ಲಿ ಅಪರಾಧ ಪ್ರಕರಣ ಅಥವಾ ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿರುವ ಅಧಿಕಾರಿಗಳಿಗೆ ಇನ್ನು ಮುಂದೆ ಪಾಸ್ಪೋರ್ಟ್ ನೀಡದಿರುವ ಸಂಬಂಧ ಅಂತಿಮಗೊಳಿಸಿರುವ ಹೊಸ ನಿಯಮಾವಳಿಯಲ್ಲಿ ಸೇರಿಸಲಾಗಿದೆ. ಆದರೆ, ತುರ್ತು ವೈದ್ಯಕೀಯ ಸನ್ನಿವೇಶದಲ್ಲಿ ವಿದೇಶಕ್ಕೆ ತೆರಳಬೇಕಾದ ಅನಿವಾರ್ಯ ಎದುರಾದಾಗ ಮಾತ್ರವೇ ವಿಶೇಷ ವಿನಾಯಿತಿ ನೀಡಲಾಗುತ್ತದೆ ಎನ್ನಲಾಗಿದೆ.