ಕಾವೇರಿ ಮಂಡಳಿ ಇಲ್ಲ: ಕೇಂದ್ರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಗೆ ತಮಿಳುನಾಡು ಚಿಂತನೆ

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶದಂತೆ 6 ವಾರಗಳ ಗಡುವಿನಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚಿಸದ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಚೆನ್ನೈ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶದಂತೆ 6 ವಾರಗಳ ಗಡುವಿನಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚಿಸದ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. 
ಕರ್ನಾಟಕ ರಾಜ್ಯವು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಸಂಬಂಧ ಯೋಜನೆ ರೂಪಿಸಬೇಕು ಎಂಬ ಸುಪ್ರೀಂಕೋರ್ಟ್ ಗಡುವು ಮಾ.29ಕ್ಕೆ ಮುಗಿದಿದೆ. ಆದರೂ ಕಾವೇರಿ ನಿರ್ವಹಣ ಮಂಡಳಿ ರಚನೆ ಕುರಿತಂತೆ ಕೇಂದ್ರ ಸರ್ಕಾರ ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಂಡಿಲ್ಲ. ಹೀಗಾಗಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಹಾಗೂ ಮಂತ್ರಿಮಂಡಲದ ಸದಸ್ಯರು ಮುಂದಿನ ಹಂತದ ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದು, ಚರ್ಚೆ ಕುರಿತಂತೆ ಈವರೆಗೂ ನಿರ್ಧಾರವನ್ನು ಪ್ರಕಟಿಸಿಲ್ಲ. 
ಇದೇ ವೇಳೆ ಇತ್ತೀಚೆಗಷ್ಟೇ ರಾಜಕೀಯಕ್ಕೆ ಧುಮುಕಿರುವ ನಟರಾದ ಕಮಲ್ ಹಾಸನ್ ಹಾಗೂ ರಜನಿಕಾಂತ್ ಅವರು, ಮಂಡಳಿ ರಚನೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com