39 ಭಾರತೀಯರ ಅವಶೇಷಗಳ ಕುರಿತ ಕಾನೂನಾತ್ಮಕ ಪ್ರಕ್ರಿಯೆಗಳು ಈಗಾಗಲೇ ಪೂರ್ಣಗೊಂಡಿದ್ದು, ನವದೆಹಲಿ ಇದೀಗ ಬಾಗ್ದಾದ್ ಒಪ್ಪಿಗೆಗಾಗಿ ಕಾಯುತ್ತಿದೆ. ಬಾಗ್ದಾದ್ ರಾಯಭಾರಿಗಳು ಒಪ್ಪಿಗೆ ನೀಡುತ್ತಿದ್ದಂತೆಯೇ ಸಿ-17 ವಿಮಾನದ ಮೂಲಕ ಇರಾಕ್ ತೆರಳಿ ಅವಶೇಷಗಳನ್ನು ಭಾರತಕ್ಕೆ ತರಲಾಗುತ್ತದೆ. ನಂತರ ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಮೃತರ ಕುಟುಂಬಸ್ಥರು ವಿಮಾನ ನಿಲ್ದಾಣಕ್ಕೆ ಬರುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.