ಇನ್ನು ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಂಧಿತ ಅರಿಜಿತ್ ಶಾಶ್ವಥ್, ನಾನು ಯಾವುದೇ ತಪ್ಪು ಮಾಡಿಲ್ಲ. ಭಾಗಲ್ಪುರದಲ್ಲಿ ಈಚೆಗೆ ನಡೆದ ಕೋಮುಗಲಭೆ ಸಂಬಂಧ, ರಾಜಕೀಯ ಒತ್ತಡಕ್ಕೆ ಒಳಗಾಗಿ ಪೊಲೀಸರು ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಮತ್ತೊಂದು ಸಮುದಾಯದ ಆರೋಪಿಗಳ ವಿರುದ್ಧ ಪೊಲೀಸರು ಈವರೆಗೂ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.