ಮುಕ್ತ ಮಾಡುವುದು ರಾಜಕೀಯ ಭಾಷೆ, ನಾವು ಯಾರನ್ನೂ ಬಹಿಷ್ಕರಿಸುವುದಿಲ್ಲ ಎಂದು ಭಾಗ್ವತ್ ಹೇಳಿದ್ದಾರೆ. ಪುಣೆಯಲ್ಲಿ ಐಎಫ್ಎಸ್ ಅಧಿಕಾರಿಯೊಬ್ಬರು ಬರೆದಿರುವ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿರುವ ಮೋಹನ್ ಭಾಗ್ವತ್, ನಮ್ಮನ್ನು ವಿರೋಧಿಸುವವರನ್ನೂ ಸೇರಿದಂತೆ ರಾಷ್ಟ್ರ ನಿರ್ಮಾಣದ ಕೆಲಸಕ್ಕಾಗಿ ಒಗ್ಗಟ್ಟಿನಿಂದ ಮುಂದಡಿ ಇಡಬೇಕಾಗುತ್ತದೆ. ನಾವು ಯಾರನ್ನೂ ಬಹಿಷ್ಕರಿಸುವುದಿಲ್ಲ ಕಾಂಗ್ರೆಸ್ ಮುಕ್ತ ಭಾರತ ರಾಜಕೀಯ ಘೋಷಣೆಯಷ್ಟೇ ಎಂದು ಭಾಗ್ವತ್ ತಿಳಿಸಿದ್ದಾರೆ.