ಕೋಲ್ಕತ್ತಾದಲ್ಲಿ ನೇತಾಜಿ ಪ್ರತಿಮೆ ಧ್ವಂಸ: ಪ್ರತಿಭಟನೆ

ಪ್ರತಿಮೆ ಭಂಜನೆ ಪ್ರಕರಣಗಳು ಮುಂದುವರೆದಿದ್ದು, ಕೋಲ್ಕತ್ತಾದಲ್ಲಿ ಸುಭಾಷ್ ಚಂದ್ರ ಬೋಸರ ಪ್ರತಿಮೆಯನ್ನು ಧ್ವಂಸಮಾಡಲಾಗಿದೆ.
ಕೋಲ್ಕತ್ತಾದಲ್ಲಿ ನೇತಾಜಿ ಪ್ರತಿಮೆ ಧ್ವಂಸ: ಪ್ರತಿಭಟನೆ
ಕೋಲ್ಕತ್ತಾದಲ್ಲಿ ನೇತಾಜಿ ಪ್ರತಿಮೆ ಧ್ವಂಸ: ಪ್ರತಿಭಟನೆ
ಕೋಲ್ಕತ್ತಾ: ಪ್ರತಿಮೆ ಭಂಜನೆ ಪ್ರಕರಣಗಳು ಮುಂದುವರೆದಿದ್ದು, ಕೋಲ್ಕತ್ತಾದಲ್ಲಿ ಸುಭಾಷ್ ಚಂದ್ರ ಬೋಸರ ಪ್ರತಿಮೆಯನ್ನು ಧ್ವಂಸಮಾಡಲಾಗಿದೆ. 
ಕೋಲ್ಕತ್ತಾದ ಉತ್ತರ ಭಾಗದಲ್ಲಿರುವ ಪಾರ್ಕ್ ನಲ್ಲಿದ್ದ ಸುಭಾಷ್ ಚಂದ್ರ ಬೋಸರ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದು, ಸ್ಥಳೀಯರು, ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ನ ಪಶ್ಚಿಮ ಬಂಗಾಳ ಪ್ರಧಾನ ಕಾರ್ಯದರ್ಶಿ ನರೇನ್ ಚಟ್ಟೋಪಾಧ್ಯಾಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. 
ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದು, ಪ್ರಕರಣ ದಾಖಲಿಸಲಾಗಿದೆ. " ಹಾನಿಗೊಳಗಾಗಿರುವ ಪ್ರತಿಮೆಯನ್ನು ಮುಚ್ಚಲಾಗಿದೆ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ಕೋಲ್ಕತ್ತಾದಲ್ಲಿರುವ ಭಾರತೀಯ ಜನಸಂಘದ ಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪ್ರತಿಮೆಗೂ ಮಾರ್ಚ್ ತಿಂಗಳಲ್ಲಿ ಹಾನಿ ಮಾಡಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com