ರಾಜಸ್ಥಾನಗದ ಆಳ್ವಾರ್, ಭರತ್ ಪುರ್ ಮತ್ತು ದೋಲ್ಪುರ್ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಮಳೆಯ ಆರ್ಭಟಕ್ಕೆ ಈ ವರೆಗೂ ವಿವಿಧ ಪ್ರಕರಣಗಳಲ್ಲಿ 31 ಮಂದಿ ಸಾವನ್ನಪ್ಪಿದ್ದಾರೆ. ಅಂತೆಯೇ ಧಾರಾಕಾರ ಮಳೆಯಿಂದಾಗಿ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಭಾರಿ ಗಾತ್ರದ ಮರಗಳೂ ಕೂಡ ನೆಲಕ್ಕುರುಳಿವೆ. ಮಳೆಯಿಂದಾಗಿ ರಾಜಸ್ಥಾನದಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ವಿದ್ಯುತ್ ಕಡಿತವಾಗಿದೆ. ರಾಜಧಾನಿ ದೆಹಲಿಯಿಂದ 164 ಕಿ.ಮೀ ದೂರದಲ್ಲಿರುವ ಆಳ್ವಾರ್ ನಲ್ಲೂ ಸಂಪೂರ್ಣ ವಿದ್ಯುತ್ ಕಡಿತವಾಗಿದೆ.