ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇವ್ ಹೇಳಿಕೆ ತಿರುಚಿದ ಮಾಧ್ಯಮಗಳು!

ಬುದ್ಧ ಪೂರ್ಣಿಮೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತ್ರಿಪುರಾ ಸಿಎಂ ಬಿಪ್ಲಬ್ ದೇವ್ ನೀಡಿದ್ದ ಹೇಳಿಕೆಯನ್ನು ಮಾಧ್ಯಮಗಳ ವರದಿಯಲ್ಲಿ ತಿರುಚಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ.
ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇವ್ ಹೇಳಿಕೆ ತಿರುಚಿದ ಮಾಧ್ಯಮಗಳು!
ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇವ್ ಹೇಳಿಕೆ ತಿರುಚಿದ ಮಾಧ್ಯಮಗಳು!
Updated on
ಅಗರ್ತಲಾ: ಬುದ್ಧ ಪೂರ್ಣಿಮೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತ್ರಿಪುರಾ ಸಿಎಂ ಬಿಪ್ಲಬ್ ದೇವ್ ನೀಡಿದ್ದ ಹೇಳಿಕೆಯನ್ನು ಮಾಧ್ಯಮಗಳ ವರದಿಯಲ್ಲಿ ತಿರುಚಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ. 
ಕೆಲವು ಪತ್ರಿಕೆಗಳ ವರದಿಯ ಪ್ರಕಾರ ತ್ರಿಪುರಾ ಸಿಎಂ ಬಿಪ್ಲಬ್ ದೇವ್ " ಈಗಿನ ಕಾಲದಲ್ಲಿ ಮ್ಯಾನ್ಮಾರ್, ಜಪಾನ್, ಟಿಬೆಟ್ ಎಂದು ಕರೆಯಲಾಗುತ್ತಿರುವ ಪ್ರದೇಶಗಳೂ ಸೇರಿ ಭಾರತದಾದ್ಯಂತ ಸಂಚರಿಸಿದ್ದ ಬುದ್ಧ ಶಾಂತಿ, ಸೌಹಾರ್ದತೆ, ಸಮೃದ್ಧಿಯ ಸಂದೇಶವನ್ನು ಸಾರಿದ್ದ" ಎಂದು ಹೇಳಿದ್ದರು. ಆದರೆ ಈ ವರದಿಯಲ್ಲಿ ಸಿಎಂ ಹೇಳಿಕೆಯನ್ನು ಯಥಾವತ್ ವರದಿ ಮಾಡದೇ ತಿರುಚಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 
ಬುದ್ಧ ಪೂರ್ಣಿಮೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಬಿಪ್ಲಬ್ ದೇವ್,  ಬುದ್ಧ ಭಾರತದಾದ್ಯಂತ  ಸುತ್ತಿ, ಶಾಂತಿ, ಸೌಹಾರ್ದತೆಯ ಸಂದೇಶ ಸಾರಿದ್ದರು, ಅದೇ ಸಂದೇಶ ಇಂದಿನ ಮ್ಯಾನ್ಮಾರ್ , ಜಪಾನ್, ಟಿಬೆಟ್ ಗಳನ್ನೂ ತಲುಪಿದೆ" ಎಂದು ಹೇಳಿದ್ದರು. ಆದರೆ ಈ ಹೇಳಿಕೆ ಕೆಲವು ಪತ್ರಿಗೆಳಲ್ಲಿ ಸರಿಯಾಗಿ ವರದಿಯಾಗಿಲ್ಲ ಎಂದು ಸಿಎಂ ಕಚೇರಿ ಹೇಳಿದೆ. 
ಮುಖ್ಯಮಂತ್ರಿಗಳ ಹೇಳಿಕೆಯನ್ನು ತಿರುಚಿರುವುದು ಸ್ಪಷ್ಟವಾಗಿದೆ ಎಂದು ತ್ರಿಪುರಾ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಮಿಲಿಂದ್ ರಾಮ್ಟೆಕೆ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com