ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಪೀಠ ಪ್ರಕರಣದ ವಿಚಾರಣೆಯನ್ನು ಮೇ.07 ರ ವರೆಗೆ ಮುಂದೂಡಿತ್ತು. ಪ್ರಕರಣದ ವಿಚಾರಣೆಯನ್ನು ಚಂಡೀಗಢಕ್ಕೆ ವರ್ಗಾವಣೆ ಮಾಡುವ ಬಗ್ಗೆ ಸಂತ್ರಸ್ತೆಯ ಕುಟುಂಬದವರು ಮನವಿ ಸಲ್ಲಿಸಿದ್ದಾರೆ. ಇದೇ ವೇಳೆ ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸುವಂತೆ ಕೂಡ ಮನವಿ ಬಂದಿದ್ದು, ಸಿಬಿಐ ತನಿಖೆಗೆ ವಹಿಸುವುದರ ಬಗ್ಗೆ ಮೇ.07 ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ.