ಪ್ರಕರಣವನ್ನು ಚಂಡೀಗಢಕ್ಕೆ ವರ್ಗಾವಣೆ ಮಾಡಬೇಕು ಎಂದು ಕೋರಿ ಸಂತ್ರಸ್ತ ಬಾಲಕಿಯ ಕುಟುಂಬ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಪೀಠ, ಮುಕ್ತ ಮತ್ತು ಪಾರದರ್ಶಕ ವಿಚಾರಣೆಗಾಗಿ ಪ್ರಕರಣವನ್ನು ಪಂಜಾಬ್ ಗೆ ವರ್ಗಾವಣೆ ಮಾಡಿದೆ. ಅಲ್ಲದೆ ಕ್ಯಾಮೆರಾ ಮುಂದೆಯೇ ಪ್ರತಿನಿತ್ಯ ಪ್ರಕರಣ ವಿಚಾರಣೆ ನಡೆಸಬೇಕು ಎಂದು ಆದೇಶಿಸಿದೆ. ಆದರೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಕೋರ್ಟ್ ನಿರಾಕರಿಸಿದೆ.