ಸುದ್ದಿವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮಾಯಾವತಿ, ಲೋಕಸಭಾ ಚುನಾವಣೆಯಲ್ಲಿ ಎಸ್ ಪಿ-ಬಿಎಸ್ ಪಿ ಪಕ್ಷಗಳ ಮೈತ್ರಿ ಮಾತುಕತೆ ನಡೆದಿದೆ. ಸೀಟು ಹಂಚಿಕೆ ವಿಚಾರ ಅಂತ್ಯಗೊಂಡ ಬಳಿಕ ಮೈತ್ರಿ ವಿಚಾರವನ್ನು ಘೋಷಿಸಲಾಗುತ್ತದೆ. ಲೋಕಸಭಾ ಚುನಾವಣೆಗೆ ಇನ್ನೂ ಸಮಯವಿದ್ದು, ಈಗಲೇ ಈ ಬಗ್ಗೆ ಹೇಳಿಕೆ ಬೇಡ. ಚುನಾವಣೆಗೆ ಸಮೀಪವಾಗುವಾಗ ಎಲ್ಲವನ್ನೂ ಬಗೆಹರಿಸಿಕೊಳ್ಳುತ್ತೇವೆ. ಅಧಿಕೃತ ಘೋಷಣೆಯಾಗದಿದ್ದರೂ ಜನರಲ್ಲಿ ಈಗಾಗಲೇ ಎಸ್ಪಿ-ಬಿಎಸ್ಪಿ ಮೈತ್ರಿ ಬಗ್ಗೆ ಅರಿವು ಉಂಟಾಗಿದೆ ಎಂದು ಮಾಯಾವತಿ ಹೇಳಿದ್ದಾರೆ.