ನವದೆಹಲಿ: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಪದಚ್ಯುತಿಗೆ ಪಟ್ಟು ಹಿಡಿರುವ ಕಾಂಗ್ರೆಸ್ ಬಗ್ಗೆ ವಿತ್ತ ಸಚಿವ ಅರುಣ್ ಜೇಟ್ಲಿ ಪ್ರತಿಕ್ರಿಯೆ ನೀಡಿದ್ದು, ತೀವ್ರವಾದ ನಿಲುವನ್ನು ಹೊಂದಿರುವ ಕಾಂಗ್ರೆಸ್ ಪಕ್ಷ ಸಮಸ್ಯೆಯಲ್ಲಿಯೂ ಲಾಭ ಪಡೆಯುವುದರ ಬಗ್ಗೆ ಚಿಂತಿಸುತ್ತಿದೆ ಎಂದು ಆರೋಪಿಸಿದ್ದಾರೆ.