ಸಿಪಿಐಎಂ ಕಾರ್ಯಕರ್ತನ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಆರ್ ಎಸ್ಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಹಲ್ಲೆಗೊಳಗಾಗಿದ್ದ ಕಾರ್ಯಕರ್ತ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನ್ನ ಕಾರ್ಯಕರ್ತ, ಮಾಜಿ ಕೌನ್ಸಿಲರ್ ಕೆ ಬಾಬು ಹತ್ಯೆ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಿಪಿಐಎಂ, ಆರ್ ಎಸ್ ಎಸ್ ರಾಜ್ಯದಲ್ಲಿ ರಾಜಕೀಯ ಹಿಂಸಾಚಾರವನ್ನು ನಿಲ್ಲಿಸಲು ಸಿದ್ಧವಿಲ್ಲ ಎಂದು ಆರೋಪಿಸಿದೆ.