ಹವಾಮಾನ ಇಲಾಖೆ ಎಚ್ಚರಿಕೆಯ ಹಿನ್ನೆಲೆಯಲ್ಲಿ ಉತ್ತರ ಮತ್ತು ಪೂರ್ವ ಭಾರತದ ರಾಜ್ಯಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ರಕ್ಷಣಾ ತಂಡಗಳನ್ನು ಸಜ್ಜುಗೊಳಿಸಲಾಗಿದೆ. ಚಂಡಮಾರುತ ಅಪ್ಪಳಿಸುವ ಸಮಯದಲ್ಲಿ ವಾಹನ ಸಂಚಾರ ಮಾಡದಂತೆಯೂ ಹವಾಮಾನ ಇಲಾಖೆ ಎಚ್ಚರಿಕೆ ವಿಧಿಸಿದ್ದು, ಅಗ್ನಿಶಾಮಕ ಹಾಗೂ ಇತರ ತುರ್ತು ಸೇವೆಗಳ ಸಿಬ್ಬಂದಿಗಳಿಗೆ ಯಾವುದೇ ಕ್ಷಣದಲ್ಲಿಯೂ ಕಾರ್ಯಪ್ರವೃತ್ತರಾಗಲು ಸಿದ್ಧವಿರುವಂತೆ ಸೂಚನೆ ನೀಡಲಾಗಿದೆ.