ಸುಪ್ರೀಂ ಕೋರ್ಟ್ ನ ಬಾರ್ ಕೌನ್ಸಿಲ್ ಅಧ್ಯಕ್ಷ ವಿಕಾಸ್ ಸಿಂಗ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಮೇ.18 ರಂದು ನಡೆಯುವ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಚಲಮೇಶ್ವರ್ ಅವರಿಗೆ ಆಹ್ವಾನ ನೀಡಲಾಯಿತು. ಆದರೆ ವೈಯಕ್ತಿಕ ಕಾರಣಗಳಿಂದ ಬರಲು ಸಾಧ್ಯವಾಗುತ್ತಿಲ್ಲ ಎಂದು ಚಲಮೇಶ್ವರ್ ಹೇಳಿರುವುದಾಗಿ ಸಿಂಗ್ ತಿಳಿಸಿದ್ದಾರೆ.