ನವದೆಹಲಿ: ಯೋಗ ಗುರು ಬಾಬಾ ರಾಮ್ ದೇವ್ ಅವರ ಜೀವನ ಕುರಿತ ಪುಸ್ತಕ ಪ್ರಕಟಣೆ ಮತ್ತು ಮಾರಾಟಕ್ಕೆ ಗುರುವಾರ ದೆಹಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಬಾಬಾ ಪುಸ್ತಕ ಪ್ರಕಟಣೆ ಮತ್ತು ಮಾರಾಟ ನಿಷೇಧವನ್ನು ತೆರವುಗೊಳಿಸಿದ್ದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ.
'ಗಾಡ್ ಮ್ಯಾನ್ ಟು ಟೈಕೂನ್' ಪುಸ್ತಕದಲ್ಲಿ ಮಾನಹಾನಿಕರ ವಿವರಗಳ ಇದ್ದು, ಅದರ ಪ್ರಕಟಣೆ ಮತ್ತು ಮಾರಾಟಕ್ಕೆ ತಡೆ ನೀಡಬೇಕು ಎಂದು ಬಾಬಾ ರಾಮ್ ದೇವ್ ಕೋರ್ಟ್ ಗೆ ಮನವಿ ಮಾಡಿದ್ದರು.