ಜೂ.4 2017ರಂದು ಉತ್ತರಪ್ರದೇಶದ ಮಖಿ ಎಂಬ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಪ್ರಕರಣದಲ್ಲಿ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗಾರ್ ಅವರ ಹೆಸರು ಕೇಳಿ ಬಂದಿತ್ತು. ಘಟನೆ ಬಳಿಕ ಬಾಲಕಿಯ ಕುಟುಂಬಸ್ಥರು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮನೆಯ ಮುಂದೆ ಸಾಮೂಹಿಕ ಆತ್ಮಹತ್ಯೆಗೆ ಯತ್ನ ನಡೆಸಿತ್ತು. ಈ ವೇಳೆ ಬಾಲಕಿಯ ತಂದೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾಗ, ಪೊಲೀಸ್ ಕಸ್ಟಡಿಯಲ್ಲಿ ಬಾಲಕಿಯ ತಂದೆ ಮೃತಪಟ್ಟಿದ್ದರು.