ಕಾಂಗ್ರೆಸ್ ನ ಮಾಜಿ ನಾಯಕ ಈಗ ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ!

ಕಾಂಗ್ರೆಸ್ ನ ಮಾಜಿ ನಾಯಕ ಕನ್ನಾ ಲಕ್ಷ್ಮಿನಾರಾಯಣ ಅವರನ್ನು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ನ ಮಾಜಿ ನಾಯಕ ಈಗ ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ!
ಕಾಂಗ್ರೆಸ್ ನ ಮಾಜಿ ನಾಯಕ ಈಗ ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ!
ವಿಜಯವಾಡ: ಕಾಂಗ್ರೆಸ್ ನ ಮಾಜಿ ನಾಯಕ ಕನ್ನಾ ಲಕ್ಷ್ಮಿನಾರಾಯಣ ಅವರನ್ನು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ. 
ಇದೇ ವೇಳೆ ಜಮ್ಮು-ಕಾಶ್ಮೀರಕ್ಕೂ ಹೊಸ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದ್ದು ರವೀಂದ್ರ ರೈನಾ ಜಮ್ಮು-ಕಾಶ್ಮೀರ ಬಿಜೆಪಿಯ ನೂತನ ಅಧ್ಯಕ್ಷರಾಗಿದ್ದಾರೆ. ಬಿಜೆಪಿಯ ಈ ಹಿಂದಿನ ಜಮ್ಮು-ಕಾಶ್ಮೀರ ಅಧ್ಯಕ್ಷರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿರುವ ಹಿನ್ನೆಲೆಯಲ್ಲಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. 
2014 ರಲ್ಲೇ ಬಿಜೆಪಿಗೆ ಸೇರಿದ್ದ ಕಾಂಗ್ರೆಸ್ ನ ಮಾಜಿ ಸಚಿವ ಲಕ್ಷ್ಮಿನಾರಾಯಣ ಅವರನ್ನು ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಅಸಮಾಧಾನ ವ್ಯಕ್ತವಾಗಿತ್ತು. ಈ ಅಸಮಾಧಾನವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವ ಅಮಿತ್ ಶಾ ಕಾಂಗ್ರೆಸ್ ನ ಮಾಜಿ ನಾಯಕನನ್ನೇ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. 2019 ರಲ್ಲಿ ಲೋಕಸಭಾ ಚುನಾವಣೆ ಹಾಗೂ ಆಂಧ್ರಪ್ರದೆಶ ವಿಧಾನಸಭಾ ಚುನಾವಣೆ ಒಟ್ಟಿಗೆ ನಡೆಯುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಾತಿ ಮಹತ್ವ ಪಡೆದುಕೊಂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com