2014 ರಲ್ಲೇ ಬಿಜೆಪಿಗೆ ಸೇರಿದ್ದ ಕಾಂಗ್ರೆಸ್ ನ ಮಾಜಿ ಸಚಿವ ಲಕ್ಷ್ಮಿನಾರಾಯಣ ಅವರನ್ನು ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಅಸಮಾಧಾನ ವ್ಯಕ್ತವಾಗಿತ್ತು. ಈ ಅಸಮಾಧಾನವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವ ಅಮಿತ್ ಶಾ ಕಾಂಗ್ರೆಸ್ ನ ಮಾಜಿ ನಾಯಕನನ್ನೇ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. 2019 ರಲ್ಲಿ ಲೋಕಸಭಾ ಚುನಾವಣೆ ಹಾಗೂ ಆಂಧ್ರಪ್ರದೆಶ ವಿಧಾನಸಭಾ ಚುನಾವಣೆ ಒಟ್ಟಿಗೆ ನಡೆಯುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಾತಿ ಮಹತ್ವ ಪಡೆದುಕೊಂಡಿದೆ.