ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ ಹಿನ್ನೆಲೆಯಲ್ಲಿ ಇಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, 122 ಸ್ಥಾನಗಳನ್ನು ಹೊಂದಿದ್ದ ಕಾಂಗ್ರೆಸ್ ಈ ಬಾರಿಯ ಚುನಾವಣೆಯಲ್ಲಿ 78ಕ್ಕೆ ಕುಸಿದಿದೆ. ಇದು ಕಾಂಗ್ರೆಸ್ ಪಕ್ಷದ ದಯನೀಯ ಸೋಲಾಗಿದೆ. ಆದರೂ ಅಧಿಕಾರ ಹಿಡಿಯಲು ಹಿಂಬಾಗಿಲಿನಿಂದ ಪ್ರಯತ್ನ ನಡೆಸುತ್ತಿದೆ ಎಂದರು.