ಹೈದರಾಬಾದ್: ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರು ಈ ಕೂಡಲೇ ವಿಧಾನಸಭೆ ಅಧಿವೇಶನ ಕರೆದು ರಾಜಕೀಯ ಪಕ್ಷಗಳಿಗೆ ಬಹುಮತ ಸಾಬೀತುಪಡಿಸಲು ಸೂಚಿಸಬೇಕು. ವಿಳಂಬ ಮಾಡಿದರೆ ಶಾಸಕರ ಕುದುರೆ ವ್ಯಾಪಾರಕ್ಕೆ ಅವಕಾಶ ನೀಡಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಬುಧವಾರ ಹೇಳಿದ್ದಾರೆ.