ಗಡಿಯಲ್ಲಿ ಪಾಕ್ ಉದ್ಧಟತನ: ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮ, 5 ನಾಗರಿಕರ ಸಾವು
ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್ ಬಳಿಕ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಹುತಾತ್ಮರಾಗಿ, ಇಬ್ಬರು ನಾಗರೀಕರಿಗೆ ಸಾವನ್ನಪ್ಪಿದ್ದಾರೆ...
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್ ಬಳಿಕ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಗಡಿ ಭದ್ರತಾ ಸಿಬ್ಬಂದಿಯೂ ಸೇರಿದಂತೆ ಒಟ್ಟು 5 ಜನರು ಸಾವನ್ನಪ್ಪಿದ್ದಾರೆ.
ಆರ್'ಎಸ್ ಪುರ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಸೀತಾರಾಮ್ ಉಪಾಧ್ಯಾಯ ಎಂಬ ಬಿಎಸ್ಎಫ್ ಯೋಧ ಹುತಾತ್ಮರಾಗಿದ್ದಾರೆಂದು ವರದಿಗಳು ತಿಳಿಸಿವೆ.
ಸೀತಾರಾಮ್ ಉಪಾಧ್ಯಾಯ ಅವರು ಜಾರ್ಖಾಂಡ್ ಮೂಲದವರಾಗಿದ್ದು, 1 ವರ್ಷದ ಪುತ್ರ ಹಾಗೂ 3 ವರ್ಷಗ ಪುತ್ರಿಯನ್ನು ಅಗಲಿದ್ದಾರೆ.
ಪಾಕಿಸ್ತಾನದ ಆಪ್ರಚೋದಿತ ಗುಂಡಿನ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ನಾಗರೀಕರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಗಡಿಯಲ್ಲಿ ಪದೇ ಪದೇ ತನ್ನ ಉದ್ಧಟತನವನ್ನು ಪ್ರದರ್ಶಿಸುತ್ತಿರುವ ಹಿನ್ನಲೆಯಲ್ಲಿ ಅಂತರಾಷ್ಟ್ರೀಯ ಗಡಿಯಿಂದ 3 ಕಿ.ಮೀ ದೂರದಲ್ಲಿರುವ ಶಾಲೆಗಳನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.