ಸುಪ್ರೀಂ ಆದೇಶ ಸಾಂವಿಧಾನಿಕ ನೈತಿಕತೆ, ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿದಿದೆ: ಹಿರಿಯ ನ್ಯಾಯವಾದಿ ಅಶ್ವನಿ ಕುಮಾರ್

ಸುಪ್ರೀಂಕೋರ್ಟ್ ಆದೇಶ ಸಾಂವಿಧಾನಿಕ ನೈತಿಕತೆ ಹಾಗೂ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿದಂತಾಗಿದೆ ಎಂದು ಹಿರಿಯ ನ್ಯಾಯವಾದಿ ಅಶ್ವನಿ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ...
ಹಿರಿಯ ನ್ಯಾಯವಾದಿ ಅಶ್ವನಿ ಕುಮಾರ್
ಹಿರಿಯ ನ್ಯಾಯವಾದಿ ಅಶ್ವನಿ ಕುಮಾರ್
ನವದೆಹಲಿ: ಸುಪ್ರೀಂಕೋರ್ಟ್ ಆದೇಶ ಸಾಂವಿಧಾನಿಕ ನೈತಿಕತೆ ಹಾಗೂ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿದಂತಾಗಿದೆ ಎಂದು ಹಿರಿಯ ನ್ಯಾಯವಾದಿ ಅಶ್ವನಿ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. 
ನೂತನವಾಗಿ ಅಧಿಕಾರ ಸ್ವೀಕರಿಸಿರುವ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸರ್ಕಾರ ನಾಳೆ(ಶನಿವಾರ) ಸಂಜೆ ನಾಲ್ಕು ಗಂಟೆಗೆ ಬಹುಮತ ಸಾಬೀತುಪಡಿಸಲು ಸುಪ್ರೀಂಕೋರ್ಟ್​ ಮಹತ್ವದ ಆದೇಶ ನೀಡಿದೆ.
ಸುಪ್ರೀಂಕೋರ್ಟ್ ಆದೇಶ ಕುರಿತು ಪ್ರತಿಕ್ರಿಯೆ ನೀಡಿರುವ ಅಶ್ವನಿ ಕುಮಾರ್ ಅವರು, ನ್ಯಾಯಾಲಯದ ಆದೇಶವನ್ನು ಸಂಭ್ರಮಿಸಬೇಕು. ಬುದ್ಧಿವಂತಿಕೆಯಿಂದ ಸುಪ್ರೀಂಕೋರ್ಟ್ ಜನರ ನಂಬಿಕೆಯನ್ನು ಗಟ್ಟಿಯಾಗುವಂತೆ ಮಾಡಿದೆ. ಅಧಿಕಾರ ಪಡೆದುಕೊಳ್ಳಲೇಬೇಕೆಂದು ಬಯಸುತ್ತಿರುವ ಪಕ್ಷಕ್ಕಿದು ಭಾರೀ ಹಿನ್ನಡೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com