ಯಡಿಯೂರಪ್ಪ ವಿಶ್ವಾಸಮತ ಪ್ರಕರಣ ಮುಕ್ತಾಯಗೊಳ್ಳುತ್ತಿದ್ದಂತೆಯೇ "ರಜೆ ದಿನಗಳನ್ನು ಆನಂದಿಸೋಣ ಎಂದು ನ್ಯಾ.ಸಿಕ್ರಿ ಹೇಳಿದ್ದಾರೆ. ನ್ಯಾ.ಸಿಕ್ರಿ ಹೇಳಿಕೆ ಬೆನ್ನಲ್ಲೇ ಕೋರ್ಟ್ ರೂಮ್ ನಲ್ಲಿರುವವರು ನಗೆಗಡಲಲ್ಲಿ ತೇಲಿದ್ದಾರೆ. ಬಹುಮತವಿಲ್ಲದಿದ್ದರೂ ಯಡಿಯೂರಪ್ಪಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್-ಜೆಡಿಎಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ನಂತರ ಸ್ಪೀಕರ್ ಬೋಪಯ್ಯ ಆಯ್ಕೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಿರಂತರ ಎರಡು ದಿನಗಳು ಕರ್ನಾಟಕದ ರಾಜಕೀಯಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿತ್ತು.