ಈಗಾಗಲೇ ಈ ಸಂಬಂಧ ಗೋವಾದಲ್ಲಿ ಪ್ರಕ್ರಿಯೆ ಆರಂಭವಾಗಿದ್ದು, ಗೋವಾದಲ್ಲಿ ವಿಪಕ್ಷಗಳು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿವೆ. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿರುವ ಗೋವಾ ಕಾಂಗ್ರೆಸ್ ಘಟಕದ ವಕ್ತಾರ ಯತೀಶ್ ನಾಯ್ಕ್ ಅವರು, ಕರ್ನಾಟಕದಲ್ಲಿ ಏನಾಗಿದೆ ಎಂಬುದು ಇದೀಗ ಎಲ್ಲರಿಗೂ ತಿಳಿದಿದೆ. ಗೋವಾದ ಬಿಜೆಪಿ ಸರ್ಕಾರಕ್ಕೆ ಸ್ವಲ್ಪವಾದರೂ ನೈತಿಕತೆ, ನಾಚಿಕೆ ಇದ್ದರೆ ಕೂಡಲೇ ಬಹುಮತ ಸಾಬೀತು ಪಡಿಸಲಿ ಅಥವಾ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.