ಈಗಾಗಲೇ ಭಾರತೀಯ ಸೇನೆಯ ಮೂರೂ ದಳಗಳಲ್ಲಿ ಬ್ರಹ್ಮೋಸ್ ಕ್ಷಿಪಣಿ ಕಾರ್ಯಾಚರಣೆಯಲ್ಲಿದ್ದು, 2007ರಿಂದ ಸೇನೆ ಬ್ರಹ್ಮೋಸ್ ಕ್ಷಿಪಣಿಯನ್ನು ಬಳಕೆ ಮಾಡುತ್ತಿದೆ. ಇನ್ನು ಕ್ಷಿಪಣಿ ಯಶಸ್ವೀ ಉಡಾವಣೆ ಕುರಿತು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟ್ವೀಟ್ ಮಾಡಿದ್ದು, ಡಿಆರ್ ಡಿಒ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಂತೆಯೇ ಕ್ಷಿಪಣಿ ಪರೀಕ್ಷೆಯ ಯಶಸ್ಸಿನಿಂದ ಭಾರತದ ಕ್ಷಿಪಣಿ ತಯಾರಿಕೆಯಲ್ಲಿ ಅಮೂಲಾಗ್ರ ಬದಲಾವಣೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.